ಶ್ರೀರಂಗಪಟ್ಟಣ: ವಿಜೃಂಭಣೆಯ ಲಕ್ಷ ದೀಪೋತ್ಸವ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ
ಆದಿರಂಗ ಎಂದೇ ಹೆಸರಾದ ಶ್ರೀರಂಗಪಟ್ಟಣದ ಶ್ರೀ ಶ್ರೀರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಮಕರ ಸಂಕ್ರಾತಿ ಪ್ರಯುಕ್ತ ಶನಿವಾರ ಸಂಧ್ಯಾಕಾಲದಲ್ಲಿ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.
 ಶನಿವಾರ ಸಂಜೆ ಸೂರ್ಯಾಸ್ತವಾಗುತ್ತಿದ್ದಂತೆ ೧೬ ಸಾಲುಗಳಲ್ಲಿ ದೀಪಗಳನ್ನು ಬೆಳಗಲಾಯಿತು. ದೇವಾಲಯ ಎದುರಿನ ರಾಜ ಮಾರ್ಗದಲ್ಲಿ ಗಂಡ ಭೇರುಂಡ ವೃತ್ತದವರಗೆ ದಬ್ಬೆ ಪಟ್ಟಿಗಳನ್ನು ಕಟ್ಟಿ ದೀಪಗಳನ್ನು ಇಡಲಾಗಿತ್ತು. ಲಕ್ಷ ದೀಪೋತ್ಸವ ಸಮಿತಿಯು ಸಾರ್ವ ಜನಿಕರು ಮತ್ತು ಭಕ್ತರ ನೆರವಿನಿಂದ ಎಣ್ಣೆ, ದೀಪಗಳನ್ನು ಸಂಗ್ರಹಿಸಿ ಜೋಡಿಸಿತ್ತು. ಬೇಬಿ ಗ್ರಾಮದ ಶ್ರೀ ದುರ್ದಂಡೇಶ್ವರ ಮಠದ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಅವರು ದೀಪೋತ್ಸವಕ್ಕೆ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ೨೫ ಸಾವಿರಕ್ಕೂ ಹೆಚ್ಚು ಭಕ್ತರು ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ