ನೆಲಕ್ಕುರುಳಿದ ೧೧ ಅನಧಿಕೃತ ಧಾರ್ಮಿಕ ಕಟ್ಟಡ


ವಿಕ ಸುದ್ದಿಲೋಕ ಚಾಮರಾಜನಗರ
ತಾಲೂಕಿನಲ್ಲಿ ಅನಧಿಕೃತವಾಗಿ ನಿರ್ಮಾಣ ಗೊಂಡಿದ್ದ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಬುಧವಾರ ಬೆಳಗ್ಗೆ ನಡೆಯಿತು.
ಸುಪ್ರೀಂಕೋರ್ಟ್ ಆದೇಶದ ಅನ್ವಯ ತಾಲೂಕಿನ ವಿವಿಧೆಡೆ ಅನಧಿಕೃತವಾಗಿದ್ದ ಹಾಗೂ ಸಾರ್ವಜನಿಕ ಜಾಗವನ್ನು ಅತಿಕ್ರಮಿಸಿ ನಿರ್ಮಿಸಿದ್ದ ದೇವಾಲಯ, ದರ್ಗಾ, ಸ್ಮಶಾನದ ಗೋಡೆ- ತಂತಿಬೇಲಿಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಂತ್ರಗಳ ನೆರವಿನಿಂದ ತೆರವು ಮಾಡಲಾಯಿತು. ನಗರಸಭೆ ವ್ಯಾಪ್ತಿಯಲ್ಲಿ ಕೆಲ ರಸ್ತೆ ಬದಿಯಲ್ಲಿದ್ದ ದೇವಾಲಯಗಳನ್ನು ತಾವೇ ತೆರವುಗೊಳಿಸಿಕೊಳ್ಳುವುದಾಗಿ ಭಕ್ತರು, ಕೆಲ ದಿನಗಳ ಕಾಲಾವಕಾಶ ಕೋರಿದರು. ಹೀಗಾಗಿ ಇಂದು ಅವುಗಳ ಕಾರ್ಯಾಚರಣೆ ನಡೆಯಲಿಲ್ಲ. ಉಳಿದಂತೆ ತಾಲೂಕಿನ ವಿವಿಧೆಡೆ ೧೧ ಧಾರ್ಮಿಕ ಕೇಂದ್ರಗಳನ್ನು ನೆಲಕ್ಕುರುಳಿಸಿ, ನ್ಯಾಯಾಲಯದ ಆದೇಶವನ್ನು ಪಾಲಿಸಲಾಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ