* ಆರ್.ಕೃಷ್ಣ, ಮೈಸೂರು
ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಿಗೆ ಮರು ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಬಿಜೆಪಿ, ಸಿದ್ಧಗೊಳ್ಳುತ್ತಿರುವುದು `ಚಾಮರಾಜ' ಕ್ಷೇತ್ರ ಸೇರಿದಂತೆ ೧೧ ಕ್ಷೇತ್ರಗಳ ಮರು ಚುನಾವಣೆಗೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಡ್ಡು ಹೊಡೆದಿದ್ದ ೧೧ ಬಿಜೆಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ್ದಲ್ಲದೇ, ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ವಿಧಾನ ಸಭಾಧ್ಯಕ್ಷರು ತೀರ್ಪು ನೀಡಿದ್ದರು. ಇದನ್ನು ಪ್ರಶ್ನಿಸಿ ೧೧ ಶಾಸಕರು ನ್ಯಾಯಾ ಲಯದ ಮೆಟ್ಟಿಲೇರಿದ್ದು, ತೀರ್ಪು ಸದ್ಯವೇ ಹೊರಬೀಳುವ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ತೀರ್ಪು ತನ್ನ ಪರವಾಗಿರಲಿದೆ ಎಂಬ ವಿಶ್ವಾಸ ದಿಂದ ಸರಕಾರ ಈಗಾಗಲೇ ಅನರ್ಹಗೊಂಡ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಹಣಕಾಸು ಆಯೋಗ (ಎಸ್ಎಫ್ಸಿ) ದಿಂದ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಿಗೆ ಮರು ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಬಿಜೆಪಿ, ಸಿದ್ಧಗೊಳ್ಳುತ್ತಿರುವುದು `ಚಾಮರಾಜ' ಕ್ಷೇತ್ರ ಸೇರಿದಂತೆ ೧೧ ಕ್ಷೇತ್ರಗಳ ಮರು ಚುನಾವಣೆಗೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಡ್ಡು ಹೊಡೆದಿದ್ದ ೧೧ ಬಿಜೆಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ್ದಲ್ಲದೇ, ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ವಿಧಾನ ಸಭಾಧ್ಯಕ್ಷರು ತೀರ್ಪು ನೀಡಿದ್ದರು. ಇದನ್ನು ಪ್ರಶ್ನಿಸಿ ೧೧ ಶಾಸಕರು ನ್ಯಾಯಾ ಲಯದ ಮೆಟ್ಟಿಲೇರಿದ್ದು, ತೀರ್ಪು ಸದ್ಯವೇ ಹೊರಬೀಳುವ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ತೀರ್ಪು ತನ್ನ ಪರವಾಗಿರಲಿದೆ ಎಂಬ ವಿಶ್ವಾಸ ದಿಂದ ಸರಕಾರ ಈಗಾಗಲೇ ಅನರ್ಹಗೊಂಡ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಹಣಕಾಸು ಆಯೋಗ (ಎಸ್ಎಫ್ಸಿ) ದಿಂದ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ