ಬೇರೆ ಪಕ್ಷ ಅಧಿಕಾರಕ್ಕೆ ಬಂದ್ರೆ ವೀರಶೈವರ ಸ್ಥಾನ ಯಾವುದು ?

*ವಿಕ ಸುದ್ದಿಲೋಕ ಮೈಸೂರು
`ವೀರಶೈವ ಸಮಾಜ ಯಾವುದೋ ಒಂದು ಪಕ್ಷಕ್ಕೆ ಸೀಮಿತ ಹಾಗೂ ವ್ಯಕ್ತಿ ಕೇಂದ್ರಿತ ಎಂಬ ಭಾವನೆ ಇದೆ. ಇದನ್ನು ಹೋಗಲಾಡಿಸಬೇಕಿದೆ. ಇಲ್ಲದಿದ್ದರೆ, ನಾಳೆ ಬೇರೆ ಪಕ್ಷ ಅಧಿಕಾರಕ್ಕೆ ಬಂದರೆ ವೀರಶೈವ ಸಮಾಜ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದೀತು' ಎಂದು ಕೇಂದ್ರದ ಮಾಜಿ ಸಚಿವ, ಜಾತ್ಯತೀತ ಜನತಾದಳ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಸಿದ್ದಾರೆ.
ನಂಜನಗೂಡು ತಾಲೂಕು ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆ ಯುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭಾದ ೨೨ನೇ ಮಹಾ ಅಧಿವೇಶನದ ಎರಡನೇ ದಿನವಾದ ಸೋಮ ವಾರ  ನಡೆದ `ಸಮಾಜ ಸಂಘಟನೆಯಲ್ಲಿ ಸಂಘ-ಸಂಸ್ಥೆಗಳ ಪಾತ್ರ' ಕುರಿತ ಸಮಾವೇಶವನ್ನು ಉದ್ಘಾಟಿಸಿದ ಯತ್ನಾಳ್ ಮಹಾಸಭಾದ ರಾಜಕೀಯ ನಡವಳಿಕೆ ಕುರಿತು ತಕರಾರು ಎತ್ತಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ