ಕುರ್ಚಿ ಉಳಿಸಿಕೊಳ್ಳಲು ಇಲ್ಲಿಗೆ ಬರಬೇಡಿ: ಸಿದ್ದಲಿಂಗೇಶ್ವರ ಸ್ವಾಮೀಜಿ

 *ಶ್ರೀ ಶಿವರಾತ್ರಿ ರಾಜೇಂದ್ರ ವೇದಿಕೆ ಸುತ್ತೂರು
ಅಣ್ಣಾ ಹಜಾರೆಯವರ ಜನಲೋಕಪಾಲ ವಿಧೇಯಕ  ಜಾರಿಗೆ ಆಗ್ರಹಿಸಿರುವ ಮಠಾಧಿಪತಿಗಳು, ಕುರ್ಚಿ ಉಳಿಸಿಕೊಳ್ಳಲು ತಮ್ಮತ್ತ ಬರಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ೨೨ ನೇ ಮಹಾಅಧಿವೇಶನದ ಮೂರನೇ ದಿನವಾದ ಮಂಗಳವಾರ ಮಠಾಧೀಶರ ಸಮಾವೇಶವನ್ನು ಉದ್ಘಾಟಿಸಿದ ಹರಿಹರದ ವೀರಶೈವ ಲಿಂಗಾಯತ ಶ್ರೀ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ೨೦೦೮ ಸಿದ್ಧಲಿಂಗೇಶ್ವರ ಸ್ವಾಮೀಜಿ ತಮ್ಮ ಅಭಿಪ್ರಾಯ ವನ್ನು ಸ್ಪಷ್ಟಪಡಿಸಿದರು. ವಿಧೇಯಕ ಜಾರಿಯಾಗಲಿ: ಮಠಗಳು ಎಂದಿಗೂ ಭ್ರಷ್ಟಾಚಾರವನ್ನು ಬೆಂಬಲಿಸಿಲ್ಲ, ಬೆಂಬಲಿಸುವುದೂ ಇಲ್ಲ. ಜನಲೋಕಪಾಲ ವಿಧೇಯಕ ಆಗ್ರಹಿಸಿ ಅಣ್ಣಾ ಹಜಾರೆ ನಡೆಸುವ ಹೋರಾಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಶೀಘ್ರವೇ ಲೋಕಪಾಲ ವಿಧೇಯಕ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ