ಹುಣಸೂರು ಪೂರ್ಣ ಬಂದ್,ರಸ್ತೆ ತಡೆ

ವಿಕ ಸುದ್ದಿಲೋಕ ಹುಣಸೂರು
ಅಪಹೃತ ವಿದ್ಯಾರ್ಥಿಗಳ ಹತ್ಯೆ ಹಾಗೂ ಪೊಲೀಸರ ವೈಫಲ್ಯ ಖಂಡಿಸಿ ಸರ್ವ ಪಕ್ಷಗಳು ಹಾಗೂ ನಾನಾ ಸಂಘಟನೆಗಳು ಕರೆ ನೀಡಿದ ಹುಣಸೂರು ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ನಾಗರಿಕರು, ವಾಣೀಜ್ಯೋದ್ಯಮಿಗಳು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ  ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಎರಡೂವರೆ ಗಂಟೆಗಳ ಕಾಲ ಮೈಸೂರು-ಮಡಿಕೇರಿ ಹೆದ್ದಾರಿ ಬಂದ್ ಮಾಡಿದ್ದರಿಂದ ವಾಹನ ಸಂಚಾರ ತೀವ್ರ ಅಸ್ತವ್ಯಸ್ತಗೊಂಡಿತ್ತು.
ಪಟ್ಟಣದಲ್ಲಿ  ಬೆಳಗ್ಗೆಯಿಂದಲೇ ಅಂಗಡಿ, ಹೋಟೆಲ್, ಸೇರಿದಂತೆ ಎಲ್ಲ ವಾಣಿಜ್ಯ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸರಕಾರಿ ಕಚೇರಿಗಳು, ಬ್ಯಾಂಕ್, ಎಲ್‌ಐಸಿ ಕಚೇರಿಗಳು ಎಂದಿನಂತೆ ಕೆಲಸ ನಿರ್ವಹಿಸಿದರೂ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬಸ್‌ಗಳ ಸಂಚಾರವಿದ್ದರೂ ಪ್ರಯಾಣಿಕರ ಸಂಖ್ಯೆ  ಅತೀ ವಿರಳವಾಗಿತ್ತು. ಸಿನಿಮಾ ಮಂದಿರಗಳು ಮುಚ್ಚಿದ್ದವು, ಮೆಡಿಕಲ್ ಸ್ಟೋರ್ ಹಾಗೂ ಹಾಲಿನ ಡೇರಿ ತೆರೆದಿದ್ದವು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ